ಕರ್ನಾಟಕ ಸೇವ ರತ್ನ ಪ್ರಶಸ್ತಿ ಹಾಗೂ ಮಕ್ಕಳಿಗೆ ಅಂಕವೀರ ಪುರಸ್ಕಾರ ಪ್ರದಾನ

Spread the love

 

ಕನ್ನಡ ರಾಜ್ಯೋತ್ಸವ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ಸುವರ್ಣ ಕರ್ನಾಟಕ ಸೇವ ರತ್ನ ಪ್ರಶಸ್ತಿ ಹಾಗೂ ಮಕ್ಕಳಿಗೆ ಅಂಕವೀರ ಪುರಸ್ಕಾರ ಪ್ರದಾನ

ಮೈಸೂರು ಕೃಷ್ಣಮೂರ್ತಿಪುರಂನಲ್ಲಿರುವ ನಮನ ಕಲಾ ಮಂಟಪದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆ ಹಾಗೂ ಕೀರ್ತಿ ಯುವತಿ ಮಹಿಳಾ ಮಂಡಳಿ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಎಸ್ ಎಸ್ ಎಲ್ ಸಿ ಹಾಗು ಪಿ ಯು ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಅಂಕವೀರ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು ಆನಂತರ ವಿವಿಧ ಕ್ಷೇತ್ರದ ಸಾಧಕರಾದ
ಪುಟ್ಟರಾಜು ಸಿ ಆರ್ (ಜಾನಪದ ಕ್ಷೇತ್ರ)
ಯಶೋಧ ರಾಮಕೃಷ್ಣ (ಸಾಹಿತ್ಯ)
ಶಾಂತವ್ವ ಹಾವನ್ನವರ (ಜನಪದ)
ಸಿ ಎಸ್ ರೋಹಿತ್ ಕುಮಾರ್ (ಸಮಾಜ ಸೇವೆ)
ಜಿ ಕೆ ಈರಪ್ಪ (ರಂಗಭೂಮಿ)
ಎಲ್ ಕೆ ಶಶಿಕಲಾ ಪುಟ್ಟರಾಜು (ಜನಪದ)
ಚಿ ರಾಧಾಕೃಷ್ಣ (ಸಾಹಿತ್ಯ) ರವರಿಗೆ
ಸುವರ್ಣ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ನಿಧಿ ಗೌರವಿಸಲಾಯಿತು
ಇದೇ ಸಂದರ್ಭದಲ್ಲಿ ಮಾತನಾಡಿದ ಮೇಲುಕೋಟೆ ಇಳ್ಳೆ ಅಳ್ವರ್‌ಸ್ವಾಮಿ
ನಾವು ಎಷ್ಟೇ ಭಾಷೆಗಳನ್ನು ಕಲಿತಿದ್ದರೂ ನಮ್ಮ ಜೀವನದ ಭಾಷೆ ಕನ್ನಡ. ಸಾವಿರಾರು ವರ್ಷದ ಇತಿಹಾಸವಿರುವ ಕನ್ನಡ ನಾಡು, ನುಡಿ, ಸಂಸ್ಕೃತಿಗೆ ಅನೇಕ ಮಹನೀಯರ ಕೊಡುಗೆ ಇದೆ’ ಎಂದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ಮಾತನಾಡಿ
ಕರ್ನಾಟಕ ರಾಜ್ಯೋತ್ಸವ ಆಚರಣೆ ಒಂದು ದಿನಕ್ಕೆ ಸೀಮಿತವಾಗದೆ ಪ್ರತಿದಿನ ಕನ್ನಡ ಭಾಷೆ ಬಳಸುವ ಮೂಲಕ ನಿತ್ಯದ ಹಬ್ಬವಾಗಬೇಕು ಎಂದರು

ಇದೇ ಸಂದರ್ಭದಲ್ಲಿ
ಮೇಲುಕೋಟೆ ಇಳ್ಳೆ ಅಳ್ವರ್‌ಸ್ವಾಮಿ , ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಕಸ್ತೂರಿ ಸಿರಿಗನ್ನಡ ವೇದಿಕೆ ಹಾಗೂ ಕೀರ್ತಿ ಯುವತಿ ಮಹಿಳಾ ಮಂಡಳಿಯ ಅಧ್ಯಕ್ಷರಾದ ಕೆ ಮಂಜುಳಾ ರಮೇಶ್,
ಲಯನ್ಸ್ ಕ್ಲಬ್ ಆಫ್ ಮೈಸೂರು ಬಾಂಧವ್ಯ ಅಧ್ಯಕ್ಷರಾದ ವಿಜಯ್ ಕುಮಾರ್ ಎಂ,
ಕಸ್ತೂರಿ ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷರಾದ ಪೋತೆರ ಮಹದೇವ್,
ಆಕಾಶವಾಣಿಯ ನಿವೃತ್ತಿ ಕಾರ್ಯಕ್ರಮ ಅಧಿಕಾರಿ ಎನ್ ವಿ ರಮೇಶ್ ಹಾಗೂ ಇನ್ನಿತರರು ಹಾಜರಿದ್ದರು